Saturday, September 16, 2017

ಉತ್ತರ ಕರ್ನಾಟಕದಿಂದ ಯಡಿಯೂರಪ್ಪ ಸ್ಪರ್ಧೆ


ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಅಥವಾ ಬಾಗಲಕೋಟೆ ಜಿಲ್ಲೆಯ ಯಾವುದಾದರೂ ಮತ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ ರಾಜಕೀಯ ಜೀವನ ಆರಂಭಿಸಿ, ಆರು ಬಾರಿ ಗೆದ್ದಿದ್ದ ಯಡಿಯೂರಪ್ಪ ಇದೇ ಮೊದಲ ಬಾರಿಗೆ ಕ್ಷೇತ್ರ ಬದಲಿಸಲಿದ್ದಾರೆ ಎಂದು ಮೂಲಗಳು  ಖಚಿತಪಡಿಸಿವೆ.
ಶನಿವಾರ ಸಂಜೆ ಪ್ರಮುಖರ ಸಮಿತಿ ಸಭೆ ನಡೆಯುತ್ತಿದ್ದಾಗಲೇ ದೆಹಲಿಯಿಂದ ಕರೆ ಮಾಡಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಇಂಥದೊಂದು ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ ಎಂದು ಗೊತ್ತಾಗಿದೆ.
ಶಿಕಾರಿಪುರದ ಮೇಲೆ ನಿಮಗೆ ಪ್ರೀತಿ ಇರುವುದ ನಿಜ. ಪಕ್ಷದ ಹಿತದೃಷ್ಟಿಯಿಂದ ನೀವು ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸಿದರೆ ಅಲ್ಲಿ ಹೆಚ್ಚಿನ ಬಲ ಬರಲಿದೆಎಂದು ಷಾ ಸಲಹೆ ನೀಡಿರುವುದಾಗಿ ಮೂಲಗಳು ಹೇಳಿವೆ.
ಸಭೆಯಲ್ಲಿದ್ದ ಪ್ರಕಾಶ್ ಜಾವಡೇಕರ್, ಪೀಯೂಷ್ ಗೋಯಲ್ ಸಲಹೆ ಬಳಿಕ ಯಡಿಯೂರಪ್ಪ ಇದಕ್ಕೆ ಸಮ್ಮತಿಸಿದ್ದಾರೆ.

0 comments:

Post a Comment

Copyright © Emediakarnataka | Designed With By Blogger Templates
Scroll To Top