Monday, September 18, 2017

ಸಂಗೊಳ್ಳಿ ರಾಯಣ್ಣ ಸಿನಿಮಾ ನಿರ್ಮಾಪಕ ಅರೆಸ್ಟ್

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೌಹಾರ್ದ ಸಹಕಾರಿ ಸಂಸ್ಥೆ ಮೂಲಕ ಹಣ ಪಾವತಿಸಿಕೊಂಡು, ವಾಪಸ್ ನೀಡದೆ ವಂಚಿಸಿದ ಆರೋಪದಡಿ ಸಂಸ್ಥೆಯ ಅಧ್ಯಕ್ಷ ಹಾಗೂ ಸಂಗೊಳ್ಳಿ ರಾಯಣ್ಣ ಸಿನಿಮಾ ನಿರ್ಮಾಪಕ ಆನಂದ ಅಪ್ಪುಗೋಳ ಅವರನ್ನು ಬೆಳಗಾವಿ ಸಿಸಿಬಿ ಪೊಲೀಸರು ಮುಂಬೈನಲ್ಲಿ ಭಾನುವಾರ ಬಂಧಿಸಿದ್ದಾರೆ.
ಇದೇ ತಿಂಗಳ 4ರಂದು ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಪ್ಪುಗೋಳ ಸೇರಿ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ದೂರು ನೀಡಿದ್ದರು.
ಠೇವಣಿದಾರರಿಗೆ ನಂಬಿಸಿ, ವಂಚಿಸಿರುವ ಆರೋಪ ಎದುರಿಸುತ್ತಿರುವ ಆನಂದ್, ಹಣವನ್ನು ಸಕಾಲಕ್ಕೆ ಪಾವತಿಸಿಲ್ಲ. ಬ್ಯಾಂಕ್ ಕಚೇರಿಗೆ, ಶಾಖೆಗಳಿಗೆ ಬೀಗ ಹಾಕಿ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ತಲೆ ಮರೆಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮುಂಬೈನ ಆಪ್ತರ ಅಪಾರ್ಟ್‌ಮೆಂಟ್‌ನಲ್ಲಿದ್ದ ಅಪ್ಪುಗೋಳ ಅವರನ್ನು ಬಂಧಿಸಿ ಕರೆತಂದಿದ್ದಾರೆ.
3ನೇ ಜೆಎಂಎಫ್‌ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದೆ.. 4 ದಿನಗಳವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 
ಅವರು ಎಷ್ಟು ಜನರಿಗೆ ಹಾಗೂ ಎಷ್ಟು ಮೊತ್ತದ ಹಣವನ್ನು ವಾಪಸ್ ಪಾವತಿಸಬೇಕಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

0 comments:

Post a Comment

Copyright © Emediakarnataka | Designed With By Blogger Templates
Scroll To Top